ಮಂಗಳೂರು : ಗಂಡನ ಪ್ರೇರಣೆಯಿಂದ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ನು ಮಹಿಳೆಯೊಂದಿಗೆ ಒತ್ತಾಯ ಪೂರ್ವಕವಾಗಿ ಅವಳ ಇಚ್ಚೆಯ ವಿರುದ್ದ ದೈಹಿಕ ಸಂಪರ್ಕ ನಡೆಸಿರುವುದಾಗಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಸಂತ್ರಸ್ಥ ಮಹಿಳೆಯೊರ್ವರು ದಿನಾಂಕ: 15-07-2025 ರಂದು ಠಾಣೆಗೆ ಹಾಜರಾಗಿ ತನ್ನ ಗಂಡನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಣ ಮಾಡಿ, ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸಿರುವುದಾಗಿದೆ ಎಂದು ಲಿಖಿತ ದೂರನ್ನು ನೀಡಿದ್ದುರು. ಸಂತ್ರಸ್ಥ ಮಹಿಳೆಯು ತನಗೆ ಪರಿಚಯವಿರುವ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ನಿಗೆ ಈ ಬಗ್ಗೆ ತಿಳಿಸಿದಾಗ, ಚಂದ್ರನಾಯ್ಕ್ ನು ಸಂತ್ರಸ್ಥೆಯ ಮನೆಗೆ ಹೋಗಿ ಗಂಡನ ಮೊಬೈಲ್ನಲ್ಲಿದ್ದ ಪೋಟೋ ಮತ್ತು ವಿಡಿಯೋವನ್ನು ಅಳಿಸಿರುತ್ತಾನೆ.
ನಂತರ ಸಂತ್ರಸ್ಥೆಯ ಗಂಡನ ದುಷ್ಪ್ರೇರಣೆಯಂತೆ ಚಂದ್ರನಾಯ್ಕ್ ನು ಸಂತ್ರಸ್ಥ ಮಹಿಳೆಯೊಂದಿಗೆ ಒತ್ತಾಯ ಪೂರ್ವಕವಾಗಿ ಅವಳ ಇಚ್ಚೆಯ ವಿರುದ್ದ ದೈಹಿಕ ಸಂಪರ್ಕ ನಡೆಸಿರುತ್ತಾನೆ.
ಸಂತ್ರಸ್ಥೆಯ ದೂರಿನ ಹಿನ್ನಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ಥ ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಚಂದ್ರನಾಯ್ಕ್ ನನ್ನು ದಸ್ತಗಿರಿ ಮಾಡಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









