ಉಡುಪಿ : ಸಂಪ್ರದಾಯಬದ್ಧ ಕಂಬಳ ಸಮಿತಿ ಉಡುಪಿ ಜಿಲ್ಲೆಯ ಪರವಾಗಿ ಮಾನ್ಯ ಉಡುಪಿ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರ್ಕಾರದಿಂದ ಅನುದಾನ ಒದಗಿಸುವ ಬಗ್ಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ಅನುದಾನದ ಬಗ್ಗೆ ಸರ್ಕಾರದೊಂದಿಗೆ ಸಮಾಲೋಚಿಸಿ ವ್ಯವಸ್ಥೆಗೊಳಿಸುವ ಬಗ್ಗೆ ಹಾಗೂ ಈ ಬಾರಿಯ ಸಂಪ್ರದಾಯಬದ್ಧ ಕಂಬಳ ವೀಕ್ಷಣೆಗೂ ಬರುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಸುಧಾಕರ್ ಹೆಗ್ಡೆ ಹೆರಂಜೆ ದೊಡ್ಡಮನೆ ಹಾಗೂ ಸಮಿತಿಯ ಕಾನೂನು ಸಲಹೆಗಾರರಾದ ಚೇರ್ಕಾಡಿ ದೊಡ್ಡಮನೆ ಪ್ರೇಮ್ ಪ್ರಸಾದ್ ಶೆಟ್ಟಿಯವರು ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









